ಚಿತ್ರದುರ್ಗ : ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಒದ್ದು ಮುಖ್ಯ ಶಿಕ್ಷಕನೋರ್ವ ಕ್ರೌರ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ.ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಂಸ್ಕ್ರತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ 9 ನೇ ತರಗತಿ ಬಾಲಕನಿಗೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮುಖ್ಯ ಶಿಕ್ಷಕ ವಿರೇಶ್ ಹೀರೇಮಠ್ ಎಂಬಾತ ಶಿಕ್ಷಕನ ಮೇಲೆ ಮನಸೋ ಇಚ್ಚೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾನೆ. ಫುಟ್ ಬಾಲ್ ನಂತೆ ಪದೇ ಪದೇ ವಿದ್ಯಾರ್ಥಿಗೆ ಒದ್ದಿದ್ದಾನೆ. ಅಜ್ಜಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿ ಈ ಹಲ್ಲೆ ನಡೆಸಿದ್ದಾನೆ. ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದು, ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ.