ಪ್ರೀತ್ಸೆ ಪ್ರೀತ್ಸೆ ಎಂದು ಶಿಕ್ಷಕಿಗೆ ಸಹಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ದೂರು

ಚಿಕ್ಕಬಳ್ಳಾಪುರ: ಶಾಲೆಯಲ್ಲಿ ಸಹ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕರನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಆಚಾರ್ಯ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಶಿಕ್ಷಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ಅಲ್ಲದೇ, ಶಾಲೆಯ ದಿನವಹಿ ದಾಖಲಾತಿ ನೀಡುವ ವಿಚಾರದಲ್ಲಿಯೂ ಕಿರಕುಳ ನೀಡಿದ್ದಾರೆ. ಮನೆಗೆ ಬಂದರೆ ಮಾತ್ರ ಶಾಲಾ ದಾಖಲಾತಿ ನೀಡುವುದಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕಿ ಹೋದ ಕಡೆಯಲ್ಲೆಲ್ಲ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ. ಸಹೋದ್ಯೋಗಿಯಿಂದ ಮನನೊಂದು ಪೊಲೀಸರ ಮೊರೆಹೋಗಿರುವ ಸಹ ಶಿಕ್ಷಕಿ ದೂರು ನೀಡಿದ್ದಾರೆ. ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕನ ವಿರುದ್ಧ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read