ಸಮೀಕ್ಷೆ ಮಾಡದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಶಿಕ್ಷಕ ಅಮಾನತು

ಕೊಪ್ಪಳ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿತರಾಗಿದ್ದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕುಂಟಿ ಗ್ರಾಮದ ಸರ್ಕಾರಿ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ಅಮಾನತುಗೊಂಡವರು.

ಸಮೀಕ್ಷೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಕೆಲವು ದಿನಗಳಿಂದ ರಾಮಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇದುವರೆಗೆ ಯಾವುದೇ ಮನೆ ಸಮೀಕ್ಷೆಗೆ ತೆರಳದೆ ಕರ್ತವ್ಯ ಲೋಪ ಎಸಗಿದ್ದಾರೆ. ಹೀಗಾಗಿ ಸಹಾಯಕ ಶಿಕ್ಷಕ ರಾಮಪ್ಪನನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read