ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ, ಚುನಾವಣೆ ಕೆಲಸಕ್ಕೆ ಶಿಕ್ಷಕರ ಬಳಕೆ ಬಗ್ಗೆ ಇಲಾಖೆ ಮತ್ತು ಶಿಕ್ಷಣ ಸಚಿವರ ನಡೆಗೆ ರಾಜ್ಯ ಸರ್ಕಾರ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ.

ತರಗತಿಗಳನ್ನು ಬಹಿಷ್ಕರಿಸಿ ಸರ್ಕಾರಿ ಶಾಲೆ ಶಿಕ್ಷಕರು ಧರಣಿಗೆ ಮುಂದಾಗಿದ್ದಾರೆ. ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ 5 ಮತ್ತು 8ನೇ ತರಗತಿ ಪರೀಕ್ಷೆ ನಿಗದಿಯಾಗಿದೆ. ಸಾಲು ಸಾಲು ಪರೀಕ್ಷೆಗಳ ನಡುವೆ ಶಿಕ್ಷಕರ ಸಂಘ ಧರಣಿಗೆ ಮುಂದಾಗಿದೆ.

ಚುನಾವಣೆ ಕೆಲಸಕ್ಕೆ ಕಡ್ಡಾಯ ಶಿಕ್ಷಕರ ಬಳಕೆ ವಿಚಾರ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈ ಬಿಡುವಂತೆ ಆಗ್ರಹಿಸಲಾಗಿದೆ. ಶಿಕ್ಷಣ ಇಲಾಖೆಗೆ ರಾಜ್ಯ ಶಿಕ್ಷಕರ ಸಂಘದಿಂದ ಎರಡು ದಿನ ಗಡುವು ನೀಡಲಾಗಿದೆ. ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಧರಣಿ ನಡೆಸಲಾಗುವುದು. ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗೇಗೌಡ, ಈ ಬಗ್ಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read