ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ.
ತೆಲಂಗಾಣ ರಾಜಧಾನಿ ಹೈದರಾಬಾದಿನ ಪಾತಬಸ್ತಿಯ ಭವಾನಿ ನಗರದ ಮುಘಲ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತನ್ನ ಬೈಕಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ನಂದಿಸಲು ಮುಂದಾಗಿದ್ದಾನೆ.
ಇದನ್ನು ಗಮನಿಸಿದ ಸ್ಥಳೀಯರು ಸಹ ಸಹಾಯಕ್ಕೆ ಬಂದಿದ್ದು, ನೀರು ಚಿಮುಕಿಸಿ ಬೆಂಕಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ಇದರ ಪರಿಣಾಮ 10 ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವ ಕಾರಣಕ್ಕೆ ಬೈಕಿಗೆ ಬೆಂಕಿ ತಗುಲಿದೆ ಎಂಬುದರ ಪರಿಶೀಲನೆ ನಡೆಸಿದ್ದಾರೆ.
https://twitter.com/TeluguScribe/status/1789680475558101303?ref_src=twsrc%5Etfw%7Ctwcamp%5Etweetembed%7Ctwterm%5E1789680475558101303%7Ctwgr%5E14a33845cea8396468dabf8ddecd2b990151e26a%7Ctwcon%5Es1_&ref_url=https%3A%2F%2Fwww.freepressjournal.in%2Findia%2Fterrifying-video-10-injured-as-royal-enfield-bike-blasts-after-catching-fire-in-hyderabad
https://twitter.com/TeluguScribe/status/1789688272593080357?ref_src=twsrc%5Etfw%7Ctwcamp%5Etweetembed%7Ctwterm%5E1789688272593080357%7Ctwgr%5E14a33845cea8396468dabf8ddecd2b990151e26a%7Ctwcon%5Es1_&ref_url=https%3A%2F%2Fwww.freepressjournal.in%2Findia%2Fterrifying-video-10-injured-as-royal-enfield-bike-blasts-after-catching-fire-in-hyderabad