ತಡರಾತ್ರಿ ಬೆಂಗಳೂರಿಗೆ ಉಗ್ರರು ಶಿಫ್ಟ್: ಇಂದು ನ್ಯಾಯಾಧೀಶರ ಎದುರು ಹಾಜರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ ಬಂಧಿಸಿದ ಎನ್ಐಎ ಅಧಿಕಾರಿಗಳು ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾವಿರ್ ಹುಸೇನ್ ಬಾಂಬ್ ಇಟ್ಟ ಉಗ್ರನಾಗಿದ್ದಾನೆ. ಅಬ್ದುಲ್ ಮತಿನ್ ತಾಹಾ ಸ್ಪೋಟಕ್ಕೆ ಮಾರ್ಗದರ್ಶನ ನೀಡಿದ್ದ. ಇಬ್ಬರನ್ನು ತಡರಾತ್ರಿ ಬೆಂಗಳೂರಿಗೆ ಕರೆತಂದ ಎನ್ಐಎ ಅಧಿಕಾರಿಗಳು ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿ ವಿಚಾರಣೆ ನಡೆಸಲಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಇಬ್ಬರನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಎನ್ಐಎ ವಶಕ್ಕೆ ಪಡೆದುಕೊಳ್ಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read