‘ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು’ : ಜೈಲಿನಿಂದ ರಿಲೀಸ್ ಬಳಿಕ ನಟ ‘ಅಲ್ಲು ಅರ್ಜುನ್’ ಫಸ್ಟ್ ರಿಯಾಕ್ಷನ್ |Actor allu arjun

ಳೆದ ವಾರ ತಮ್ಮ ‘ಪುಷ್ಪ 2: ದಿ ರೂಲ್’ ಚಿತ್ರದ ಪ್ರೀಮಿಯರ್ ಶೋ ವೇಳೆ ಅಭಿಮಾನಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ಜಾಮೀನು ನೀಡಿದೆ.

ಜೈಲಿನಿಂದ ಬಿಡುಗಡೆಯಾದ ನಂತರ ಅಲ್ಲು ಅರ್ಜುನ್ ತಮ್ಮ ಮೊದಲ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.
ಜೈಲಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಟ, “ನಾನು ಕಾನೂನನ್ನು ಪಾಲಿಸುವ ನಾಗರಿಕನಾಗಿದ್ದೇನೆ ಮತ್ತು ಸಹಕರಿಸುತ್ತೇನೆ. ನಾನು ಮತ್ತೊಮ್ಮೆ ಅವರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದೊಂದು ದುರದೃಷ್ಟಕರ ಘಟನೆ. ಅಭಿಮಾನಿಗಳು ಯಾರೂ ಚಿಂತಿಸಬೇಕಾಗಿಲ್ಲ, ನಾನು ಆರೋಗ್ಯವಾಗಿದ್ದೇನೆ, ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ನಟ ಅಲ್ಲು ಅರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ.

 

14 ದಿನಗಳ ನ್ಯಾಯಾಂಗ ಬಂಧನಕ್ಕೀಡಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದ ಕೆಲವೇ ಗಂಟೆಗಳಲ್ಲಿ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರಾಗಿದೆ.ಇಂದು 6:30 ಕ್ಕೆ ಹೈದರಾಬಾದ್ ಜೈಲಿನಿಂದ ಅಲ್ಲು ಅರ್ಜುನ್ ರಿಲೀಸ್ ಆಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read