ಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿಟರಿ ತರಬೇತಿ ಕೇಂದ್ರದಲ್ಲಿ ಮಿಲಿಟರಿ ಪೊಲೀಸ್ ಸಿಬ್ಬಂದಿಯಾಗಿದ್ದ ಗುಜರಾತ್ ಮೂಲದ 26 ವರ್ಷದ ಚೌಧರಿ ಕೌಶಿಕ್ ಮೃತಪಟ್ಟವರಾಗಿದ್ದಾರೆ.

ಭಾನುವಾರದಂದು ಇವರು ತಮ್ಮ ಏಳು ಜನ ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆ ಬಂದಿದ್ದು, ಕೆಳಗ ಇಳಿಯುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read