BREAKING : ಬೆಂಗಳೂರಲ್ಲಿ ‘ಜ್ಯುವೆಲ್ಲರಿ ಶಾಪ್’ ಗೆ ನುಗ್ಗಿ ಫೈರಿಂಗ್ ಪ್ರಕರಣ ; ಮೂವರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದ ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಯಲ್ಲಿ ದುಷ್ಕರ್ಮಿಗಳು ಫೈರಿಂಗ್ ಮಾಡಿ ಚಿನ್ನಾಭರಣ ದೋಚಲು ಯತ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಡಿ ಹಾಗೂ ಸೂರಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದುಷ್ಕರ್ಮಿಗಳ ಗುಂಡೇಟಿಗೆ ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿತ್ತು, ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದೇಶದ ಹಲವು ಕಡೆ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read