ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಅದಲು ಬದಲು ಮಾಡಿದ ಆರೋಪ ಕೇಳಿ ಬಂದಿದೆ.
ಗಂಡು ಮಗು ಕೊಟ್ಟ ಬಳಿಕ ಹೆಣ್ಣು ಮಗು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಸಿಂಧನೂರು ನಗರ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದೆ.
ಸಿಂಧನೂರು ತಾಲೂಕಿನ ಗಾಂಧಿನಗರದ ಹುಲ್ಲಪ್ಪ ಮತ್ತು ರೇವತಿ ದಂಪತಿ ಮಗುವನ್ನು ಅದಲು ಬದಲು ಮಾಡಿದ ಆರೋಪ ಕೇಳಿಬಂದೆ. ಹೆರಿಗೆಯ ನಂತರ ರೇವತಿಗೆ ಗಂಡು ಮಗು ನೀಡಿ ಎದೆ ಹಾಲುಣಿಸಲು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ. ನಂತರ ರೇವತಿಯವರಿಗೆ ನಿಮಗೆ ಹೆಣ್ಣು ಮಗು ಜನಿಸಿದೆ, ಗಂಡು ಮಗು ಅಲ್ಲ, ಅದು ತಪ್ಪಾಗಿದೆ. ನಿಮಗೆ ಸಿಸೇರಿಯನ್ ಆಗಿ ಹೆಣ್ಣು ಮಗು ಜನಿಸಿದೆ ಎಂದು ನರ್ಸ್ ಗಳು ತಿಳಿಸಿದ್ದಾರೆ. ಹೀಗಾಗಿ ಕುಟುಂಬದವರು ಸಿಂಧನೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.