ಬೆಂಗಳೂರು : ರಾಜ್ಯ ಸರ್ಕಾರ ಸುಳ್ಳು ಕೇಸ್ ದಾಖಲಿಸಿ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆಶೋಕ್ ‘’ 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ@INCKarnatakaಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ@BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ.
ಸಿಎಂ@siddaramaiahನವರೇ ಹಾಗೂ ಡಿಸಿಎಂ@DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ @BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ.
— R. Ashoka (@RAshokaBJP) May 26, 2025
ಸಿಎಂ @siddaramaiah ನವರೇ ಹಾಗೂ ಡಿಸಿಎಂ… pic.twitter.com/XAuxoTxQW1