ಪ್ರತಿನಿತ್ಯ ‌ʼಅಂಜೂರʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ…..!

ಅಂಜೂರ ಹಣ್ಣು ಬಲು ದುಬಾರಿ ಎಂಬುದೇನೊ ನಿಜ. ಆದರೆ ಅದನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ನಾರಿನಂಶ ಹೇರಳವಾಗಿರುವ ಅಂಜೂರದ ಸೇವನೆಯಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಒಣ ಅಥವಾ ಹಸಿ ಅಂಜೂರ ಸೇವನೆಯಿಂದ ನೀವು ಈ ಪ್ರಯೋಜನ ಪಡೆದುಕೊಳ್ಳಬಹುದು.

ಕಫ ಕರಗಿಸಿ, ಕೆಮ್ಮು ದೂರ ಮಾಡುವ ಅಂಜೂರಕ್ಕೆ ದೇಹ ತೂಕ ಕಡಿಮೆ ಮಾಡುವ ಶಕ್ತಿಯೂ ಇದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ರಕ್ತದೊತ್ತಡ ಸಮಸ್ಯೆ ನಿವಾರಣೆಗೆ ನೆರವಾಗುವ ಅಂಜೂರದಲ್ಲಿ ಅತಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಯಂ ಅಂಶವಿದೆ.

ಮೂತ್ರಪಿಂಡದ ಸಮಸ್ಯೆಯಿಂದ ಬಳಲುವವರು ಅಂಜೂರ ಸೇವಿಸಿದರೆ ಬಹಳ ಒಳ್ಳೆಯದು. ಅಂಜೂರವನ್ನು ಒಂದು ಗಂಟೆ ಹೊತ್ತು ಹಾಲಿನಲ್ಲಿ ನೆನೆಸಿಟ್ಟು ರುಬ್ಬಿ ಎರಡು ಹನಿ ಬಾದಾಮಿ ಎಣ್ಣೆ ಸೇರಿಸಿ ಮುಖಕ್ಕೆ ಹಚ್ಚಿಕೊಂಡರೆ ಕಲೆ ಸಮಸ್ಯೆ ದೂರವಾಗಿ ಮುಖ ಹೊಳಪು ಪಡೆದುಕೊಳ್ಳುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read