ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ವಾಹನಗಳ ಟೋಯಿಂಗ್ ನಿಯಮ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ವಾಹನಗಳ ಟೋಯಿಂಗ್ ನಿಯಮ ಜಾರಿಗೆ ಚಿಂತನೆ ನಡೆಸಲಾಗಿದೆ. ಸಾರ್ವಜನಿಕರಿಗೆ ಇದರಿಂದ ಉಪಯೋಗವಾಗುವುದಾದರೆ ಜಾರಿಗೆ ತರುತ್ತೇವೆ, ಇಲ್ಲವಾದರೆ ತರಲ್ಲ. ಈ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸುತ್ತೇವೆ ಎಂದರು.
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಪೊಲೀಸರು ಈ ರೀತಿ ಮಾಡಿರುವುದು ಸರಿಯಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಬಾರದು. ಎಲ್ಲೋ ಮೂಲೆಯಲ್ಲಿ ನಿಂತು ವಾಹನಗಳನ್ನು ಅಡ್ಡಹಾಕಬಾರದು. ಇದೊಂದು ಅವೈಜ್ಞಾನಿಕ ಪದ್ದತಿ ಎಂದರು.ಪೊಲೀಸರು ನಿನ್ನೆ ಮಾನವೀಯತೆ ತೋರಲಿಲ್ಲ, ಸರಿಯಾಗಿ ನಡೆದುಕೊಳ್ಳಲಿಲ್ಲ ಎಂದರು.
You Might Also Like
TAGGED:ಟೋಯಿಂಗ್ ನಿಯಮ'