ನೇಹಾ, ಅಂಜಲಿ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಮತ್ತು ಅಂಜಲಿ ಅವರ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ ಪತ್ರ ಬಂದಿದೆ.

ಬೆಂಗೇರಿಯ ರೋಟರಿ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ದೀಪಾ ಅಡವಿಮಠ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. ಅಂಚೆ ಮೂಲಕ ಮುಖ್ಯ ಶಿಕ್ಷಕಿ ದೀಪಾ ಅವರಿಗೆ ಐದು ದಿನಗಳ ಹಿಂದೆ ಬೆದರಿಕೆ ಪತ್ರ ಬಂದಿದೆ. ಈ ಬಗ್ಗೆ ಅವರು ಕೇಶವಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿಕ್ಷಕಿಯ ಮನೆಗೆ ಭೇಟಿ ನೀಡಿದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಎಸಿಪಿ ಶಿವಪ್ರಕಾಶ್ ನಾಯಕ್ ಅವರು ಶಿಕ್ಷಕಿ ಮನೆಗೆ ತೆರಳಿ ಮಾಹಿತಿ ಪಡೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಕಿ ಮನೆ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read