ಪ್ರಧಾನಿ ಮೋದಿಗೆ ತಲ್ವಾರ್ ತೋರಿಸಿ ಕೊಲೆ ಬೆದರಿಕೆ : ಆರೋಪಿ ವಿರುದ್ಧ ‘FIR’ ದಾಖಲು

ಯಾದಗಿರಿ : ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿಗೆ ಖಡ್ಗ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರ ಕಟ್ ಮಾಡುತ್ತೇನೆ ಎಂದು ಸುರಪುರದ ಮೊಹಮದ್ ರಸೂಲ್ ಎಂಬಾತ ತಲ್ವಾರ್ ಹಿಡಿದು ಬೆದರಿಕೆ ಹಾಕಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಪ್ರಧಾನಿ ಮೋದಿ ಅಲ್ಲದೇ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಸೆಲ್ಫಿ ವಿಡಿಯೋ ಮಾಡಿದ ರಸೂಲ್ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಮೋದಿ ಆಡಳಿತ ಸರಿಯಾಗಿ ಮಾಡುತ್ತಿಲ್ಲ, ಸುಮ್ಮನೆ ಕಾಂಗ್ರೆಸ್ ಗೆ ಬೈಯಬೇಡ, ಪಾರ್ಟಿ ಬಿಟ್ಟು ನನ್ನ ಜೊತೆ ಜಗಳಕ್ಕೆ ಬಾ ಎಂದು ಬಾಯಿಗೆ ಬಂದ ಹಾಗೆ ನಿಂದಿಸಿದ್ದಾನೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಮಹಮದ್ ರಸೂಲ್ ವಿರುದ್ಧ ಕೊಲೆ ಬೆದರಿಕೆ, ನಿಂದನೆ ಹಾಗೂ ಸಶಸ್ತ್ರ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read