ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಿಸುತ್ತಿದ್ದ ಮೂವರು ಅರೆಸ್ಟ್

ಚಾಮರಾಜನಗರ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಪೋಲೀಸರು ಹಾಗೂ ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್(38), ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರ ಸ್ವಾಮಿ(45) ರಾಗಿಬೊಮ್ಮನಹಳ್ಳಿಯ ನಾಗರಾಜ್(50) ಬಂಧಿತರು. ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ನಕ್ಷತ್ರ ಆಮೆ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಹುಲುಸುಗುಡ್ಡೆಯ ಸಮೀಪ ಕೊಳ್ಳೇಗಾಲ ಪೊಲೀಸರು ಹಾಗೂ ಅರಣ್ಯ ಸಂಚಾರಿ ದಳ ಕಾರ್ಯಾಚರಣೆ ನಡೆಸಿದ್ದು, ಒಂದು ಕೆಜಿ 280 ಗ್ರಾಂ ತೂಕದ ಎರಡು ಜೀವಂತ ನಕ್ಷತ್ರ ಆಮೆ ಹಾಗೂ ಕಾರ್ ವಶಕ್ಕೆ ಪಡೆದಿದ್ದಾರೆ. ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read