ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನ ಅಶೋಕಪುರಂನಲ್ಲಿ ಮೂವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಅಶೋಕಪುರಂ ನಿವಾಸಿ ಸಿದ್ದರಾಜು ಅವರ ಪುತ್ರಿ ಲಾವಣ್ಯ(11), ಮುದ್ದೇಶ್ ಅವರ ಪುತ್ರಿ ಅಮೂಲ್ಯ(10), ಯಶು(10) ನಾಪತ್ತೆಯಾಗಿರುವ ಬಾಲಕಿಯರು.
ಭಾನುವಾರ ಮಧ್ಯಾಹ್ನ ಮನೆ ಬಳಿ ಆಟವಾಡುತ್ತಿದ್ದ ಮೂವರು ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಗಾಬರಿಯಾದ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದು, ಮಕ್ಕಳ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. ಆತಂಕಗೊಂಡ ಪೋಷಕರು ನಂಜನಗೂಡು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇನ್ಸ್ಪೆಕ್ಟರ್ ರವೀಂದ್ರ ನೇತೃತ್ವದಲ್ಲಿ ತಂಡ ರಚಿಸಿ ಮಕ್ಕಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಮಕ್ಕಳು ಮೈಸೂರಿನಿಂದ ಹಾಸನಕ್ಕೆ ಹೋಗಿ ಅಲ್ಲಿಂದ ಸುಬ್ರಹ್ಮಣ್ಯ ಬಸ್ ಹತ್ತಿರುವ ಮಾಹಿತಿ ಗೊತ್ತಾಗಿದ್ದು, ಮಕ್ಕಳನ್ನು ಕರೆತರಲು ಪೊಲೀಸರು ತೆರಳಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.