BIG NEWS: ಆಂಧ್ರದಲ್ಲಿ ಭೀಕರ ರಸ್ತೆ ದುರಂತ ; ಮೂವರು ಸ್ಥಳದಲ್ಲೇ ಸಾವು !

ಆಂಧ್ರಪ್ರದೇಶದ ಕಡಪ ಜಿಲ್ಲೆಯ ವಂಟಿಮಿಟ್ಟ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಚಲಿಸುತ್ತಿದ್ದ ಎಸ್‌ಯುವಿಯೊಂದು ಎಲೆಕ್ಟ್ರಿಕ್ ಬಸ್ ಮತ್ತು ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ತಿರುಪತಿಯಿಂದ ನಂದ್ಯಾಲಕ್ಕೆ ಅತಿ ವೇಗದಲ್ಲಿ (ಗಂಟೆಗೆ 100 ಕಿ.ಮೀ ಗಿಂತ ಹೆಚ್ಚು) ತೆರಳುತ್ತಿದ್ದ ಸ್ಕಾರ್ಪಿಯೋ ವಾಹನವು ಎದುರಿನಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್‌ಗೆ ಮೊದಲು ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ, ಬಸ್ಸಿನ ಹಿಂಭಾಗದಲ್ಲಿದ್ದ ಪೊಲೀಸ್ ಗಸ್ತು ವಾಹನಕ್ಕೂ ಅಪ್ಪಳಿಸಿ ರಸ್ತೆ ಬದಿಯ ಮರಕ್ಕೆ ಗುದ್ದಿದೆ.

ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ತೀವ್ರವಾದ ತಲೆ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಧರ್ಮ ರೆಡ್ಡಿ, ವಿನೋದ್ ಮತ್ತು ತೇಜೇಶ್ವರ ನಾಯ್ಡು ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರಲ್ಲಿ ಸುನೀಲ್ ಕುಮಾರ್ ಅವರ ಸ್ಥಿತಿ ಗಂಭೀರವಾಗಿದೆ. ಪೊಲೀಸ್ ವಾಹನ ಚಾಲಕ ಕಾನ್‌ಸ್ಟೆಬಲ್ ರಘುನಾಥ ರೆಡ್ಡಿ ಮತ್ತು ಮತ್ತೊಬ್ಬ ವ್ಯಕ್ತಿಗೂ ಗಾಯಗಳಾಗಿವೆ.

ಸ್ಥಳಕ್ಕೆ ಧಾವಿಸಿದ ವಂಟಿಮಿಟ್ಟ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅತಿ ವೇಗದಿಂದಲೇ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾರಿಗೆ ಸಚಿವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read