ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಪಶ್ಚಿಮ ಬಂಗಾಳದಲ್ಲಿ ಹಲ್ಲೆ| Watch video

ನವದೆಹಲಿ: ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಸಾಧುಗಳ ಗುಂಪನ್ನು ಗುಂಪೊಂದು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ ಭಾರತೀಯ ಜನತಾ ಪಕ್ಷವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಸಾಧುಗಳು ಅಪಹರಣಕಾರರು ಎಂದು ಶಂಕಿಸಿ ಗುಂಪೊಂದು ಥಳಿಸಿದೆ.

ಮಕರ ಸಂಕ್ರಾಂತಿ ಹಬ್ಬಕ್ಕಾಗಿ ಸಾಧುಗಳು  ಗಂಗಾಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗವನ್ನು ಕೇಳುತ್ತಿರುವಾಗ ಕೆಲವು ಸ್ಥಳೀಯರು ಅನುಮಾನಗೊಂಡರು ಬಳಿಕ ಅವರು ಸರಿಯಾದ ಉತ್ತರ ನೀಡದ ಹಿನ್ನಲೆಯಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.

https://twitter.com/amitmalviya/status/1745838999611359310?ref_src=twsrc%5Etfw%7Ctwcamp%5Etweetembed%7Ctwterm%5E1745864998482837655%7Ctwgr%5E1e14ef79e8da39bba9c75afbe655862487f4a6e5%7Ctwcon%5Es3_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue

ಘಟನೆ ಕುರಿತು ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿರುವವ ಬಿಜೆಪಿ, ಮಮತಾ ಬ್ಯಾನರ್ಜಿ ಅವರ ಮೌನಕ್ಕೆ ನಾಚಿಕೆಯಾಗಬೇಕು! ಈ ಹಿಂದೂ ಸಾಧುಗಳು ನಿಮ್ಮ ಮೆಚ್ಚುಗೆಗೆ ಅರ್ಹರಲ್ಲವೇ? ದೌರ್ಜನ್ಯವು ಉತ್ತರದಾಯಿತ್ವವನ್ನು ಬಯಸುತ್ತದೆ” ಎಂದು ಬಿಜೆಪಿ ಪಶ್ಚಿಮ ಬಂಗಾಳ ಸಾಮಾಜಿಕ ಮಾಧ್ಯಮ ಎಕ್ಸ್ (ಔಪಚಾರಿಕವಾಗಿ ಟ್ವಿಟರ್) ನಲ್ಲಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಪೋಸ್ಟ್‌ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read