ಮದ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಮೂವರಿಗೆ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸದ ಶಿಕ್ಷೆ

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ಮದ್ಯ ಸೇವಿಸಿ ಸಾರ್ವಜನಿಕವಾಗಿ ಗಲಾಟೆ ಮಾಡಿ ಶಾಂತಿ ಕದಡುತ್ತಿದ್ದ ಮೂವರು ಆರೋಪಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ದಿನ ಸ್ವಚ್ಛತಾ ಕೆಲಸ ಮತ್ತು ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಆರೋಪಿಗಳಾದ ಸೋಮವಾರಪೇಟೆಯ ದೀಪಕ್, ಕೌಶಿಕ್, ಕಾರ್ತಿಕ್ ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ವೇಳೆ ಅವರನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಆರೋಪಿಗಳು ತಪ್ಪೊಪ್ಪಿಕೊಂಡಿದ್ದರಿಂದ ಬಿಎನ್ಎಸ್ 275ರಂತೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಬುಧವಾರ ಶಿಕ್ಷೆ ವಿಧಿಸಿದ್ದಾರೆ. ಸೋಮವಾರ ಪೇಟೆ ಪೊಲೀಸ್ ಠಾಣೆಯ ಎಸ್ಐ ಗೋಪಾಲ್ ಸಮ್ಮುಖದಲ್ಲಿ ಆರೋಪಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read