BIG NEWS: ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಕೋಲಾರ: ಲೋಕಸಭಾ ಚುನಾವಣೆ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ನಾಳೆ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೂರು ಗ್ರಾಮಗಳ ಜನರು ಮತದಾನ ಬಹಿಷ್ಕಾರಿಸಲು ನಿರ್ಧರಿಸಿದ್ದಾರೆ.

ಬೈರ್ನಹಳ್ಳಿ, ತೊರ್ನಹಳ್ಳಿ, ಸೊಣ್ಣನಾಯಕನಹಳ್ಳಿಯ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಕೆ.ಸಿ.ವ್ಯಾಲಿ ನೀರು ಗ್ರಾಮಗಳ ಕೆರೆಗಳಿಗೆ ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ಜಿಲ್ಲಾಡಳಿತ ನೀರು ಹರಿಸದಿದ್ದರೆ ನಾಳೆ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ನೀರು ಬಿಡದಿದ್ದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮತದಾನದಲ್ಲಿ ಭಾಗವಹಿಸಲ್ಲ ಎಂದು ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಎಚ್ಚರಿಕೆ ಕೊಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read