BREAKING : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್

BREAಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಗೆ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಅರಣ್ಯಾಧಿಕಾರಿಗಳ ನೋಟಿಸ್ಗೆ ನಾಲ್ಕು ಜನ ಉತ್ತರಿಸಬೇಕಿದ್ದು, ದರ್ಶನ್, ನಿಖಿಲ್ ಬರವಣಿಗೆ ಮೂಲಕ ಉತ್ತರ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹುಲಿ ಉಗುರು ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು ನಿನ್ನೆ ಸ್ಯಾಂಡಲ್ ವುಡ್ ಸ್ಟಾರ್ ಗಳ ನಿವಾಸಕ್ಕೆ ಲಗ್ಗೆಯಿಟ್ಟಿದ್ದರು. ನಟ ದರ್ಶನ್, ನಟ ಜಗ್ಗೇಶ್, ನಟ ನಿಖಿಲ್ ಕುಮಾರಸ್ವಾಮಿ, ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಅರಣ್ಯಾಧಿಕಾರಿಗಳು ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಎಷ್ಟೇ ಜಾಲಾಡಿದರೂ ಯಾವುದೇ ಪೆಂಡೆಂಟ್ ಪತ್ತೆಯಾಗಿಲ್ಲ. ಸದ್ಯ, ಮೂರೂ ಪೆಂಡೆಂಟ್ಗಳನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read