ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.

ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) ಮೃತಪಟ್ಟವರು ಎಂದು ಹೇಳಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಲಾರಿ ಚಾಲಕನ ಬೇಜವಾಬ್ದಾರಿಗೆ ಬೈಕ್ ಸವಾರ ನವೀನ್ ಬಲಿಯಾಗಿದ್ದಾರೆ.

ಲಾರಿ ಚಾಲಕರ ರ್ಯಾಷ್ ಡ್ರೈವಿಂಗ್ ಗೆ ಪೊಲೀಸರು ಕಡಿವಾಣ ಹಾಕಿಲ್ಲ. ದಿನಕ್ಕೊಂದು ಅಪಘಾತವಾಗಿ ಸಾವು ನೋವು ಸಂಭವಿಸುತ್ತಿದ್ದರೂ ಮೌನ ವಹಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದ ಸವಾರರು, ಪಾದಚಾರಿಗಳ ಪ್ರಾಣಕ್ಕೆ ಕುತ್ತು ಬಂದಿದೆ ಎಂದು ಸರ್ಜಾಪುರ ಠಾಣೆ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read