ಗ್ರೇಟರ್ ನೋಯ್ಡಾದ ನಿಕ್ಕಿ ಭಾಟಿ ವರದಕ್ಷಿಣೆ ಕೊಲೆ ಪ್ರಕರಣದ ಆಕ್ರೋಶದ ನಡುವೆಯೇ, ರಾಜಸ್ಥಾನದ ಜೋಧ್ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ ಮತ್ತೊಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಶಾಲಾ ಉಪನ್ಯಾಸಕಿಯೊಬ್ಬರು ಶುಕ್ರವಾರ ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಕ್ಷಿಣೆಗಾಗಿ ಪತಿ ದಿಲೀಪ್ ಮತ್ತು ಅತ್ತೆ ಮಾವ ಕಿರುಕುಳ ನೀಡುತ್ತಿದ್ದಾರೆ ಮಹಿಳೆ ಡೆತ್ ನೋಟ್ ಬರೆದಿಟ್ಟಿದ್ದಾರೆ.
ದಂಗಿಯಾವಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಕೆಲಾವ್ನಲ್ಲಿರುವ ಸರ್ನಾದ ಕಿ ಧನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಶಾಲಾ ಉಪನ್ಯಾಸಕಿ ಮನೆಗೆ ಹಿಂತಿರುಗಿ, ಒಳಗಿನಿಂದ ಬಾಗಿಲು ಲಾಕ್ ಮಾಡಿ, ಕುರ್ಚಿಯ ಮೇಲೆ ಕುಳಿತು, ತನ್ನ ಮತ್ತು ತನ್ನ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆಕೆಯ ಪತಿ ಅಥವಾ ಅತ್ತೆ-ಮಾವ ಇಬ್ಬರೂ ಮನೆಯಲ್ಲಿ ಇರಲಿಲ್ಲ. ಮೂರು ವರ್ಷದ ಮಗು ನೆಲಕ್ಕೆ ಬಿದ್ದು ತೀವ್ರ ಸುಟ್ಟಗಾಯಗಳಿಂದಾಗಿ ತಕ್ಷಣವೇ ಸಾವನ್ನಪ್ಪಿತು.
ಮನೆಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ನೆರೆಹೊರೆಯವರು ಮಹಿಳೆಯ ಕುಟುಂಬ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರು ಮನೆಗೆ ಬಂದು ನೋಡಿದಾಗ ಅವರ ಮಗಳು ಮತ್ತು ಮೊಮ್ಮಗ ಬೆಂಕಿಯಲ್ಲಿ ಸುಟ್ಟು ಹೋಗಿರುವುದನ್ನು ನೋಡಿದರು. ಉಪನ್ಯಾಸಕಿಯನ್ನು ಮಹಾತ್ಮ ಗಾಂಧಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು.ಮಹಿಳೆಯ ತಂದೆ ಒಮಾರಾಮ್ ಬಿಷ್ಣೋಯ್ ಅವರು ಅತ್ತೆ-ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ .