ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಆಂಧ್ರಪ್ರದೇಶದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಕಾಣಿಕೆಹುಂಡಿಯಲ್ಲಿ ಜುಲೈನಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ತಿರುಪತಿ ತಿರುಮಲ ದೇವಸ್ಥಾನದ(ಟಿಟಿಡಿ) ಆಡಳಿತ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾ ರಾವ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜುಲೈನಲ್ಲಿ 22 ಲಕ್ಷ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. 8.6 ಲಕ್ಷ ಭಕ್ತರು ಮುಡಿ ಕೊಡುವ ಹರಕೆ ಸಲ್ಲಿಸಿದ್ದಾರೆ. ಕೋಟಿಗೂ ಅಧಿಕ ಲಡ್ಡುಗಳನ್ನು ಮಾರಾಟ ಮಾಡಲಾಗಿದೆ. 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read