ರಾತ್ರಿ ದಿಢೀರ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಕಿಶನ್ ರೆಡ್ಡಿ

ನವದೆಹಲಿ: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ, ಈಶಾನ್ಯ ಪ್ರದೇಶದ ಸಂಸ್ಕೃತಿ ಮತ್ತು ಅಭಿವೃದ್ಧಿ ಸಚಿವ ಮತ್ತು ಸಿಕಂದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಅವರು ಭಾನುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಗೆ ದಾಖಲಾಗಿದ್ದಾರೆ.

ರಾತ್ರಿ 10.50ರ ಸುಮಾರಿಗೆ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ಕಾರ್ಡಿಯೋ ನ್ಯೂರೋ ಸೆಂಟರ್‌ನ ಕಾರ್ಡಿಯಾಕ್ ಕೇರ್ ಯೂನಿಟ್‌ಗೆ ದಾಖಲಿಸಲಾಗಿದೆ.

ಭಾನುವಾರ ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್‌ ಆರ್ಟ್‌ನಲ್ಲಿ(ಎನ್‌ಜಿಎಂಎ) ಪ್ರಧಾನಿ ಮೋದಿ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ 100ನೇ ಸಂಚಿಕೆ ಸ್ಮರಣಾರ್ಥ ‘ಜನ ಶಕ್ತಿ: ಎ ಕಲೆಕ್ಟಿವ್ ಪವರ್’ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read