ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ವೇಳೆಯಲ್ಲಿ ಹೋರಿ ತಿವಿದು ಯುವಕ ಮೃತಪಟ್ಟಿದ್ದಾನೆ.

ಪರಮೇಶ ಸಿದ್ದಪ್ಪ ಹರಿಜನ(21) ಮೃತಪಟ್ಟ ಯುವಕ. ದೀಪಾವಳಿ ಬಲಿಪಾಡ್ಯದ ಪ್ರಯುಕ್ತ ಚಿಗಳ್ಳಿಯಲ್ಲಿ ಶನಿವಾರ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತಮುತ್ತಲಿನ ಭಾಗಗಳಿಂದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಹೋರಿಗಳ ಓಟವನ್ನು ವೀಕ್ಷಿಸುತ್ತಿದ್ದ ಪರಮೇಶನ ಮೇಲೆ ಏಕಾಏಕಿ ದಾಳಿ ಮಾಡಿದ ಹೋರಿಯೊಂದು ಎದೆಯ ಭಾಗಕ್ಕೆ ತಿವಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಪರಮೇಶನನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read