BIG NEWS: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆ

ತಿರುವನಂತಪುರಂ: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂ ಬಳಿ ನಡೆದಿದೆ.

ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕೊಟ್ಟಾಯಂ-ನೀಲಂಬೂರ್ ರೈಲು ಎರ್ನಾಕುಲಂ ಕಡೆಗೆ ಚಲಿಸುತ್ತಿದ್ದ ವೇಳೆ ಮೂವರು ಮಹಿಲೆಯರು ರೈಲಿನ ಮುಂದೆ ಹಾರಿದ್ದಾರೆ ಎನ್ನಲಾಗಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಯಿತು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read