BIG NEWS: ವರ್ಗಾವಣೆ ದಂಧೆ ಆರೋಪ; ಎಚ್ಚೆತ್ತ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಕೇಳಿಬರುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಸರ್ಕಾರದ ವಿರುದ್ಧದ ಆರೋಪ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಯಾವುದೇ ಅಧಿಕಾರಿಗಳ ವರ್ಗಾವಣೆ, ಪೋಸ್ಟಿಂಗ್ ಗೆ ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ. ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ವರ್ಗಾವಣೆ ಆದೇಶ ಹೊರಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.

ಒಂದು ವೇಳೆ ಸಿಎಂ ಅನುಮತಿ ಪಡೆಯದೇ ವರ್ಗಾವಣೆ ಮಾಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read