BREAKING : ಕರ್ನಾಟಕ ಬಂದ್’ಗೆ ಸಾರಿಗೆ ಬಸ್ ಗಳ ಬೆಂಬಲ : ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ.!

ಬೆಂಗಳೂರು : ಮಾ.22 ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್’ಗೆ ಸರ್ಕಾರಿ ಬಸ್ ಗಳ ಬೆಂಬಲ ನೀಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.  ನಮಗೆ ಮೌಖಿಕ ರೂಪದಲ್ಲಿ ಮನವಿ ಬಂದಿದೆ. ಹೋರಾಟಗಾರರ ಬೇಡಿಕೆಗಳು ರಾಜ್ಯದ ಪರವಾಗಿದೆ. ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಅವರ ಕಾಳಜಿ ಸರಿ ಇದೆ ಎಂದು ಹೇಳಿದರು.

ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿಸಿದ್ದಾರೆ. ಬಂದ್ ಮಾಡಲ್ಲ ಎಂದಿದ್ದಾರೆ. ಆಟೋ ಚಾಲಕರ ಸಂಘಟನೆ ಬಂದ್ ಗೆ ಬೆಂಬಲ ಘೋಷಿಸಿದೆ. ಹೋಟೆಲ್ ಮಾಲೀಕರ ಸಂಘ ಬಂದ್ ಗೆ ನೈತಿಕ ಬೆಂಬಲ ಮಾತ್ರ ಘೋಷಿಸಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read