ತ್ರಿವಿಧ ದಾಸೋಹ ಕ್ಷೇತ್ರ ಸಿದ್ಧಗಂಗಾಗೆ ಹರಿದುಬರುತ್ತಿರುವ ವಿದ್ಯಾರ್ಥಿಗಳು; ಈ ಬಾರಿಯೂ ಶಾಲಾ ದಾಖಲಾತಿಗೆ ನೂಕುನುಗ್ಗಲು

ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾದ ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಸ್ತುತ ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿಗಾಗಿ ಬರ್ತಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಸೀಟ್ ಗಳು ಖಾಲಿಯಾಗುತ್ತಿವೆ. ಉತ್ತರ ಕರ್ನಾಟಕದ ದೂರದ ಭಾಗದ ಪೋಷಕರು ತಮ್ಮ ಮಕ್ಕಳನ್ನು ಮಠಕ್ಕೆ ಸೇರಿಸಲು ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಠದಿಂದ ಪ್ರತಿ ವರ್ಷ 10,000 ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡಲಾಗುತ್ತದೆ. ಇದನ್ನು ಮೀರಿ ಹೆಚ್ಚುವರಿ ಮಕ್ಕಳನ್ನು ದಾಖಲಿಸಲು ಸಾಧ್ಯವಿಲ್ಲ ಎಂಬುದು ಮಠದ ಆಡಳಿತ ಮಂಡಳಿ ಹೇಳಿಕೆ. ವಸತಿ ಸೌಲಭ್ಯದ ಕೊರತೆಯಾಗುತ್ತದೆ ಎಂಬುದೇ ಇದಕ್ಕೆ ಕಾರಣ.

8 ಮತ್ತು 9ನೇ ತರಗತಿ ದಾಖಲಾತಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇದು ಮಠದ ನಿರ್ವಹಣೆಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹೀಗಾಗಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮಠದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಗದಗ, ಬೀದರ್, ಕೊಪ್ಪಳ, ಬಾಗಲಕೋಟೆ, ಹಾವೇರಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಸದುದ್ದೇಶದಿಂದ ದಿವಂಗತ ಮಠಾಧೀಶ ಶ್ರೀ ಶಿವಕುಮಾರ ಸ್ವಾಮೀಜಿ ಇಂತಹ ಮಹೋನ್ನತ ವ್ಯವಸ್ಥೆಯನ್ನು ರೂಪಿಸಿದ್ದರು. ಮಠದಿಂದ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಜೀವನ ರೂಪಿಸಿಕೊಂಡಿದ್ದಾರೆ.

ಹೆಚ್ಚುವರಿಯಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂಬ ಆಶಯವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ಇದಕ್ಕಾಗಿ ಮಠದ ಆವರಣದಲ್ಲಿ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯ ಕಾಮಗಾರಿ ಮುಂದುವರಿಸುವಂತೆ ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಎಲ್ಲ ಕಾಮಗಾರಿಗಳನ್ನು ಪರಿಶೀಲನೆಗಾಗಿ ಸ್ಥಗಿತಗೊಳಿಸಿದ್ದರು. ಆದೇಶದ ಮೇರೆಗೆ ಪಿಡಬ್ಲ್ಯುಡಿ ಅಧಿಕಾರಿಗಳು ಬೃಹತ್ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಸಿದ್ದಗಂಗಾ ಮಠದ 9.90 ಕೋಟಿ ರೂ.ಗಳ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಹಾಸ್ಟೆಲ್ ನಿರ್ಮಾಣ ಕಾಮಗಾರಿಗೆ ಮತ್ತೆ ಅನುಮತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read