ಅತ್ತೆ ಕಿರುಕುಳಕ್ಕೆ ಮನನೊಂದ ಸೊಸೆ ಆತ್ಮಹತ್ಯೆಗೆ ಯತ್ನ

ತುಮಕೂರು: ಅತ್ತೆಯ ಕಿರುಕುಳಕ್ಕೆ ಮನನೊಂದ ಸೊಸೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬೀರಸಂದ್ರದಲ್ಲಿ ನಡೆದಿದೆ.

ಕ್ರಿಮಿನಾಷಕ ಸೇವಿಸಿ ಸೊಸೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸುಮಲತಾ (37) ಆತ್ಮಹತ್ಯೆಗೆ ಯತ್ನಿಸಿರುವ ಸೊಸೆ. ತೀವ್ರ ಅಸ್ವಸ್ಥರಾಗಿರುವ ಮಹಿಳೆಯನ್ನಿ ಕೆ.ಬಿ.ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

18 ವರ್ಷಗಳ ಹಿಂದೆ ಸುಮಲತಾ ನರಸಿಂಹಮೂರ್ತಿ ಎಂಬುವವರನ್ನು ವಿವಾಹವಾಗಿದ್ದರು. ಒಂದೂವರೆ ವರ್ಷದ ಹಿಂದೆ ಪತಿ ನರಸಿಂಹಮೂರ್ತಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತಿ ಮ್ರ‍ಿತಪಟ್ಟ ಬಳಿಕ ಅತ್ತೆ ಲಕ್ಕಮ್ಮ ಹಾಗೂ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಅತ್ತೆಯ ವಿರುದ್ಧ ಕಿರುಕುಳ ಮಾಡಿರುವ ಸೊಸೆ ಸುಮಲತಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read