BREAKING: ಚಲಿಸುತ್ತಿದ್ದ ಕಾರ್ ಟೈಯರ್ ಸ್ಪೋಟಗೊಂಡು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ತುಮಕೂರು: ಚಲಿಸುತ್ತಿದ್ದ ಕಾರ್ ನ ಟೈಯರ್ ಸ್ಪೋಟವಾಗಿ ಮರಕ್ಕೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಸಂಭವಿಸಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಜೇಂದ್ರಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ತುಮಕೂರಿನಲ್ಲಿ ಮದುವೆ ಮುಗಿಸಿ ಕಾರ್ ನಲ್ಲಿ ಮಂಡ್ಯಕ್ಕೆ ತೆರಳುತ್ತಿದ್ದ ಮಂಡ್ಯ ಮೂಲದ 28 ವರ್ಷದ ಆಕರ್ಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಕರ್ಷ್ ಶವವನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹುಲಿಯೂರುದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read