ಬಂಡೆ ಸ್ಪೋಟದ ವೇಳೆ ಘೋರ ದುರಂತ: ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ತುಮಕೂರು: ಬಂಡೆ ಸ್ಪೋಟಿಸುವ ವೇಳೆ ಕಾರ್ಮಿಕ ಸಾವು ಕಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಸಮೀಪ ನಡೆದಿದೆ.

ರಾಯಚೂರು ಮೂಲದ ಕಾರ್ಮಿಕ ಬಸವರಾಜ(46) ಮೃತಪಟ್ಟವರು ಎಂದು ಹೇಳಲಾಗಿದೆ. ಸೋಲಾರ್ ಪಾರ್ಕ್ ನಿರ್ಮಿಸಲು ಬಂಡೆ ಸ್ಫೋಟಿಸುವಾಗ ದುರಂತ ಸಂಭವಿಸಿದೆ. ಮತ್ತೊಬ್ಬ ಕಾರ್ಮಿಕ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸ್ಥಳದಲ್ಲಿದ್ದ ಬಂಡೆ ಸ್ಫೋಟಿಸುವಾಗ ಘಟನೆ ನಡೆದಿದ್ದು, ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಬಂಡೆ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ. ಬಂಡೆ ಸ್ಫೋಟಿಸಿದ್ದರಿಂದ ಸಮೀಪದಲ್ಲಿ ಗುಡ್ಡಕ್ಕೂ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read