ತಮಿಳುನಾಡಿನ ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ 39 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ನಂತರ ತಮ್ಮ ಹೃದಯ ‘ಛಿದ್ರಗೊಂಡಿದೆ’ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಶನಿವಾರ ಹೇಳಿದ್ದಾರೆ.
ಮಾರಣಾಂತಿಕ ಘಟನೆಯ ನಂತರದ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ, ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ವಿಜಯ್ ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
“ನನ್ನ ಹೃದಯ ಛಿದ್ರವಾಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನರಳುತ್ತಿದ್ದೇನೆ,” ಎಂದು ಅವರು ಎಕ್ಸ್ನಲ್ಲಿ ಹೇಳಿದ್ದು, ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ತ್ವರಿತ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
இதயம் நொறுங்கிப் போய் இருக்கிறேன்; தாங்க முடியாத, வார்த்தைகளால் சொல்ல முடியாத வேதனையிலும் துயரத்திலும் உழன்று கொண்டிருக்கிறேன்.
— TVK Vijay (@TVKVijayHQ) September 27, 2025
கரூரில் உயிரிழந்த எனதருமை சகோதர சகோதரிகளின் குடும்பங்களுக்கு என் ஆழ்ந்த அனுதாபங்களையும், இரங்கலையும் தெரிவித்துக்கொள்கிறேன். மருத்துவமனையில் சிகிச்சை…