ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸ್ಕೂಟರ್ ಅನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಲು ಕೋರ್ಟ್ ನಿಂದ ಆದೇಶವಾಗಿತ್ತು. ಅಂತೆಯೇ ದೂರುದಾರ ಪೊಲೀಸ್ ನಿರೀಕ್ಷಕ ಶರೀಫ್ ಅವರನ್ನು ಭೇಟಿಯಾಗಿದ್ದು, 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚದ ಮೊತ್ತ ಕಡಿಮೆ ಮಾಡಿ ಎಂದು ದೂರುದಾರರು ಕೇಳಿಕೊಂಡಾಗ ಶರೀಫ್ ಅವರು ಠಾಣಾ ಬರಹಗಾರ್ತಿ ನಾಗರತ್ನ ಅವರನ್ನು ಭೇಟಿ ಮಾಡುವಂತೆ ಸೂಚಿಸಿದ್ದಾರೆ. ನಾಗರತ್ನ ಅವರು ದೂರುದಾರನಿಗೆ ಅವಾಚ್ಯ ಪದಗಳಿಂದ ಬೈದು ಮೂರು ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರ್ತಿ ನಾಗರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೋಮವಾರ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ್  ದೂರುದಾರನಿಂದ 3000 ರೂ. ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ನಾಗರತ್ನ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read