BIG NEWS: ದ್ವಿಚಕ್ರ ವಾಹನ ಖರೀದಿದಾರರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್: ಎಲ್ಲಾ ತಾಲೂಕುಗಳಲ್ಲಿ ಡ್ರೈವಿಂಗ್ ಸ್ಕೂಲ್: ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದ ಕಾರಣದಿಂದ ಅನೇಕ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನ ತಯಾರಕರು ವಾಹನವನ್ನು ಖರೀದಿಸುವವರಿಗೆ ರಿಯಾಯಿತಿ ಅಥವಾ ಸಮಂಜಸವಾದ ದರದಲ್ಲಿ ಹೆಲ್ಮೆಟ್ ನೀಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.

2022ರಲ್ಲಿ ದೇಶದಲ್ಲಿ ಹೆಲ್ಮೆಟ್ ಧರಿಸದೇ ಇದ್ದ ಅಪಘಾತಗಳಲ್ಲಿ 50,029 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನ ಖರೀದಿಸುವವರಿಗೆ ಹೆಲ್ಮೆಟ್‌ಗಳ ಮೇಲೆ ಸ್ವಲ್ಪ ಕಡಿಮೆ ರಿಯಾಯಿತಿಯನ್ನು ನೀಡಿದರೆ ನಾವು ಜನರ ಜೀವವನ್ನು ಉಳಿಸಬಹುದು. ಈ ನಿಟ್ಟಿನಲ್ಲಿ ದ್ವಿಚಕ್ರ ವಾಹನ ತಯಾರಕರಿಗೆ ವಿನಂತಿಸುತ್ತೇನೆ ಎಂದರು.

ಶಾಲಾ ಬಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಯೋಜಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು, ದೇಶದ ಪ್ರತಿ ತಾಲೂಕಿನಲ್ಲಿ ಡ್ರೈವಿಂಗ್ ಸ್ಕೂಲ್ ಆರಂಭಿಸುವ ಮಹತ್ವಾಕಾಂಕ್ಷೆ ಇದೆ ಎಂದರು. ಮೋಟಾರು ವಾಹನಗಳ(ತಿದ್ದುಪಡಿ) ಕಾಯಿದೆ -2019 ಟ್ರಾಫಿಕ್ ಅಪರಾಧಗಳ ಮೇಲೆ ಭಾರಿ ದಂಡವನ್ನು ಜಾರಿಗೊಳಿಸಿದೆ. ಆದರೆ ವಾಸ್ತವವಾಗಿ, ಪರಿಣಾಮಕಾರಿ ಜಾರಿ ಕೂಡ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read