BIG NEWS: ಗನ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು; ಓರ್ವನ ಸ್ಥಿತಿ ಗಂಭೀರ

ಉಡುಪಿ: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವರಿಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ನಡೆದಿದೆ.

ಬಟ್ಟೆ ಅಂಗಡಿಯಲ್ಲಿ ಯಾರೋ ಒಬ್ಬರು ಗನ್ ಬಿಟ್ಟು ಹೋಗಿದ್ದಾರೆ. ಅಂಗಡಿಯ ಸಿಬ್ಬಂದಿಗಳು ಗನ್ ಎತ್ತಿಕೊಂಡು ಪರಿಶೀಲಿಸುತ್ತಿದ್ದ ವೇಳೆ ಏಕಾಏಕಿ ಗುಂಡು ಹಾರಿದೆ. ಎದುರಿಗೆ ಇದ್ದ ವ್ಯಕ್ತಿಗೆ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಗಾಯಾಳುವನ್ನು ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು ಗನ್ ವಶಕ್ಕೆ ಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read