ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ.

ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಲಾಗಿತ್ತು. ತನ್ನ ಸಂಬಂಧಿಯ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಪ್ರವೀಣ್ ನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೆರೆಹಿಡಿದಿದ್ದು, ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಆಯ್ನಾಸ್ ಟಾರ್ಗೆಟ್ ಮಾಡಿ ಪ್ರವೀಣ್ ಕೊಲೆ ಮಾಡಿದ್ದಾನೆ. ಇಬ್ಬರೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಆಯ್ನಾಸ್ ಗಗನಸಖಿಯಾಗಿದ್ದು, ಪ್ರವೀಣ್ ಕ್ಯಾಬಿನ್ ಕ್ರೂ ಆಗಿದ್ದರು. ಪರಸ್ಪರ ದ್ವೇಷ ಅಥವಾ ಏಕಮುಖ ಪ್ರೀತಿಯಿಂದ ಕೃತ್ಯವೆಸಗಿರುವ ಸಾಧ್ಯತೆ ಇದೆ.

ನಾಲ್ವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರವೀಣ್ ಚೌಗಲೆ ನಿನ್ನೆ ಬಂಧಿತನಾಗಿದ್ದಾನೆ. ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ನಗರದಲ್ಲಿ ಭಾನುವಾರ ನಾಲ್ವರನ್ನು ಹತ್ಯೆ ಮಾಡಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read