ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ.
ಸಿಎಂ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ವಿಚಾರವಾಗಿ ಬಿಜೆಪಿ ಹೋರಾಟ ನಡೆಸಿತ್ತು. ಪಕ್ಷದ ಶಾಸಕರು ರಾಜ್ಯಪಾಲರಿಗೂ ದೂರು ನೀಡಿ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದ್ದರು.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ.
– ಮುಖ್ಯಮಂತ್ರಿ @siddaramaiah pic.twitter.com/3aVKquZYQ6— CM of Karnataka (@CMofKarnataka) August 7, 2023