ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ, ಆದರೆ ಪ್ರಧಾನಿ ಮೋದಿಗೆ ಅದು ಕಾಣುತ್ತಿಲ್ಲ: ರಾಹುಲ್ ಗಾಂಧಿ

ಕಾಶಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯ 35ನೇ ದಿನ ಇಂದು. ಈ ಯಾತ್ರೆ ಈಗ ಮಣಿಪುರದಿಂದ ಪ್ರಾರಂಭವಾಗಿದ್ದು, ಅಸ್ಸಾಂ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಬಿಹಾರದ ಮೂಲಕ ಉತ್ತರ ಪ್ರದೇಶವನ್ನು ತಲುಪಿದೆ.

ಇಂದು ಈ ಯಾತ್ರೆ ಪ್ರಧಾನಿ ಮೋದಿಯವರ ಭದ್ರಕೋಟೆ ಎಂದು ಕರೆಯಲ್ಪಡುವ ಕಾಶಿಯನ್ನು ತಲುಪಿದೆ. ಯಾತ್ರೆಯ ಸಂದರ್ಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಾವು 4000 ಕಿ.ಮೀ ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದೇವೆ. ಈ ಪ್ರಯಾಣದ ಸಮಯದಲ್ಲಿ, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ವ್ಯಾಪಾರಿಗಳು ನನ್ನನ್ನು ಭೇಟಿಯಾಗಿ ತಮ್ಮ ನೋವನ್ನು ವಿವರಿಸಿದ್ದಾರೆ.

ಬಿಜೆಪಿ ಮತ್ತು ಆರ್‌ ಎಸ್‌ ಎಸ್‌  ಜನರು ಸಹ ಭೇಟಿಯಾದರು, ಆದರೆ ಇಡೀ ಪ್ರಯಾಣದಲ್ಲಿ ನಾನು ಎಲ್ಲಿಯೂ ದ್ವೇಷವನ್ನು ನೋಡಲಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ದೇಶ ಬಲಿಷ್ಠವಾಗುತ್ತದೆ. ದೇಶದಲ್ಲಿ ನಿರುದ್ಯೋಗವು ವೇಗವಾಗಿ ಹೆಚ್ಚುತ್ತಿದೆ, ಆದರೆ ಪ್ರಧಾನಿ ಮೋದಿ ಅದನ್ನು ನೋಡುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read