BIG NEWS: 5 ವರ್ಷಗಳಲ್ಲಿ ಬಡವರಿಗೆ 2 ಕೋಟಿ ಮನೆ; ಇದು ಮೋದಿ ಸರ್ಕಾರದ ಗ್ಯಾರಂಟಿ; ಕೇಂದ್ರ ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ಶ್ಲಾಘನೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ವಿಕಸಿತ-ಪ್ರಗತಿಶೀಲ ಭಾರತದ ಬಜೆಟ್ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶ್ಲಾಘಿಸಿದ್ದಾರೆ.

ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರಿಯೇ “ಮೋದಿ ಸರ್ಕಾರದ ಗ್ಯಾರಂಟಿ” ಎಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 3 ಕೋಟಿ ಮನೆಗಳ ಹಂಚಿಕೆ ಗುರಿ ಸಾಧನೆ ಸಮೀಪದಲ್ಲಿದ್ದು, ಮುಂದಿನ 5 ವರ್ಷಗಳಲ್ಲಿ ಹೆಚ್ಚುವರಿ 2 ಕೋಟಿ ಮನೆಗಳ ಹಂಚಿಕೆ ಗುರಿ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ.

ವಿತ್ತ ಸಚಿವರು ಮಂಡಿಸಿದ ಬಜೆಟ್ ಶ್ರೀಸಾಮಾನ್ಯರ ಪರವಾಗಿದೆ. ವಿಕಸಿತ-ಪ್ರಗತಿಶೀಲ ಭಾರತಕ್ಕೆ ಪೂರಕ ಬಜೆಟ್. 7 ಲಕ್ಷ ರೂ. ಆದಾಯ ಇರುವ ಮದ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಕೊಟ್ಟು ಬಹು ದೊಡ್ಡ ಕೊಡುಗೆ ನೀಡಿದ್ದಾರೆ. 1 ಕೋಟಿ ಮನೆಗಳಿಗೆ ಸೋಲಾರ್ ವಿದ್ಯುತ್, ಕಾರ್ಪೋರೇಟ್ ಟ್ಯಾಕ್ಸ್ ಶೇ.22ಕ್ಕೆ ಇಳಿಕೆ, ವಿಮಾನ ನಿಲ್ದಾಣ, ವಿಮಾನಗಳ ಸಂಖ್ಯೆ ಹೆಚ್ಚಳ, ಪ್ರವಾಸೋದ್ಯಮ ಅಭಿವೃದ್ಧಿ, ರೈಲ್ವೆ ಸೌಲಭ್ಯ ಹೀಗೆ ಸಮತೋಲಿತ ಬಜೆಟ್ ಇದಾಗಿದೆ. ಸರ್ವ ವರ್ಗದ ಅಗತ್ಯ ಆಶೋತ್ತರಗಳಿಗೆ ಸ್ಪಂದಿಸಿ, ಲೋಕಸಭಾ ಚುನಾವಣೆಗೂ ಮುನ್ನ ಪ್ರಗತಿಶೀಲ ಭಾರತಕ್ಕೆ ಪೂರಕವಾದ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read