ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರದಿಂದ ಪರಿಶೀಲನಾ ಸಮಿತಿ ರಚನೆ

ನವದೆಹಲಿ: ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ಕೇಂದ್ರ ಹಣಕಾಸು ಸಚಿವಾಲಯ ಸಮಿತಿ ರಚಿಸಿದೆ.

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(ಎನ್‌ಪಿಎಸ್) ಅಡಿಯಲ್ಲಿ ಸರ್ಕಾರಿ ನೌಕರರಿಗೆ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ಸಮಿತಿಯ ರಚನೆಗೆ ಹಣಕಾಸು ಸಚಿವಾಲಯ ಸೂಚನೆ ನೀಡಿದೆ. ಸಾಮಾನ್ಯ ನಾಗರಿಕರನ್ನು ರಕ್ಷಿಸಲು ಹಣಕಾಸಿನ ವಿವೇಕ ಉಳಿಸಿಕೊಂಡು ನೌಕರರ ಅಗತ್ಯತೆಗಳನ್ನು ತಿಳಿಸುವ ವಿಧಾನವನ್ನು ರೂಪಿಸಲು ಸಮಿತಿಗೆ ಹಣಕಾಸು ಸಚಿವಾಲಯ ನಿರ್ದೇಶನ ನೀಡಿದೆ.

ಆದಾಗ್ಯೂ, ಆದೇಶವು ಸಮಿತಿಗೆ ಗಡುವನ್ನು ನಿರ್ದಿಷ್ಟಪಡಿಸಿಲ್ಲ. ನಾಲ್ವರು ಸದಸ್ಯರ ಸಮಿತಿಯ ನೇತೃತ್ವವನ್ನು ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ವಹಿಸಲಿದ್ದಾರೆ.

ಸಮಿತಿಯು ಅಭಿವೃದ್ಧಿಪಡಿಸಿದ ವಿಧಾನವು ಕೇಂದ್ರ ಮತ್ತು ರಾಜ್ಯಗಳಿಗೆ ಅನ್ವಯಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ತಿಂಗಳು 24 ರಂದು ಲೋಕಸಭೆಗೆ ತಿಳಿಸಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read