ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ಆರೋಪ: ಕಂದಾಯ ಇಲಾಖೆಯಿಂದ ಸರ್ವೇ

ರಾಮನಗರ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕ ಪ್ರಕಾಶ್, ವಿಶಾಲಾಕ್ಷಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ.

35ಕ್ಕೂ ಹೆಚ್ಚು ಸರ್ವೇ ನಂಬರ್ ಗಳ ಜಮೀನುಗಳನ್ನು ಪರಿಶೀಲನೆ ನಡೆಸಲಾಗಿದೆ. 110 ಎಕರೆಗೂ ಹೆಚ್ಚು ಜಮೀನು ಸರ್ವೆ ನಡೆಸಲಾಗಿದೆ. ಕುಮಾರಸ್ವಾಮಿ ಮತ್ತು ಅವರ ಸಹೋದರಿಯ ಅನಸೂಯ ಮಂಜುನಾಥ್, ಅವರ ಸಂಬಂಧಿ ಡಿ.ಸಿ. ತಮ್ಮಣ್ಣ ಹೆಸರಿನಲ್ಲಿರುವ ಭೂಮಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು.

ಸಾಮಾಜಿಕ ಹೋರಾಟಗಾರರ ದೂರಿನ ಅನ್ವಯ ವರದಿಗೆ ಸೂಚನೆ ನೀಡಲಾಗಿತ್ತು. ವರದಿ ನೀಡುವಂತೆ ಹೈಕೋರ್ಟ್ ಕಂದಾಯ ಇಲಾಖೆಗೆ ಸೂಚನೆ ನೀಡಿತ್ತು. ಕಂದಾಯ ಇಲಾಖೆ ಅಧಿಕಾರಿಗಳಿಂದ ಹೆಚ್.ಡಿ. ಕುಮಾರಸ್ವಾಮಿ ಜಮೀನು ಸರ್ವೆ ಕಾರ್ಯ ನಡೆಸಲಾಗಿದ್ದು, ಸರ್ವೆ ನಡೆಸಿ ರಾಮನಗರ ಜಿಲ್ಲಾಧಿಕಾರಿಗೆ ಕಂದಾಯ ಅಧಿಕಾರಿಗಳು ವರದಿ ನೀಡಲಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪದ ಬಗ್ಗೆ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ. ವರದಿ ನೀಡುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ತಾಕೀತು ಮಾಡಿ ಶೀಘ್ರ ವರದಿ ನೀಡುವಂತೆ ಕಂದಾಯ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆಯ ಬೆನ್ನಲ್ಲೇ ಕಂದಾಯ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read