ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ.

ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿಯವರು ಖಾತೆ ಹಂಚಿಕೆ ಮಾಡಿದ್ದಾರೆ. ಕೃಷಿ ಖಾತೆ ಸಿಗುವ ನಿರೀಕ್ಷೆ ಇತ್ತು. ಮೋದಿಯವರು ದೇಶದ ಅಭಿವೃದ್ಧಿಗೆ ಪೂರಕವಾಗಿ ಖಾತೆ ನೀಡಿದ್ದಾರೆ. ಜೂನ್ 11ರಂದು ಸಂಜೆ 5 ಗಂಟೆಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ವಿಶ್ವಾಸವಿಟ್ಟು ಖಾತೆ ಹಂಚಿಕೆ ಮಾಡಿದ್ದು, ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read