ಶೌಚಗುಂಡಿ ಸ್ವಚ್ಛ ಮಾಡಲು ಹೋಗಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಶೌಚಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೃತಪಟ್ಟಿದ್ದಾರೆ. ಪ್ರಹ್ಲಾದ್ ಮಂಡಲ್ (60), ಅಳಿಯ ಕಾರ್ತಿಕ್ ವಿಶ್ವಾಸ್ (38) ಹಾಗೂ ಮಗಳು ತನು ವಿಶ್ವಾಸ್ (32) ಮೃತ ದುರ್ದೈವಿಗಳು.
ಇತ್ತೀಚೆಗಷ್ಟೇ ಪ್ರಹ್ಲಾದ್ ಮಂಡಲ್ 8 ಅಡಿ ಆಳದ ಶೌಚಗುಂಡಿ ನಿರ್ಮಾಣ ಮಾಡಿದ್ದರು. ಇದನ್ನು ಸ್ವಚ್ಛಗೊಳಿಸಲೆಂದು ಅಳಿಯ ಹಾಗೂ ಮಗಳೊಂದಿಗೆ ಇಳಿದಿದ್ದಾರೆ. ಈ ವೇಳೆ ಪಕ್ಕದ ಹಳೆ ಶೌಚಗುಂಡಿಯಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಹೊರಬರಲು ಸಾಧ್ಯವಾಗದೇ ಮೂವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.