ಪುಣೆ: ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಪುತ್ರ ಪ್ರೀತಮ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ವೈಷ್ಣವಿ ಕೊಲೆ ಪ್ರಕರಣ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ, ಕೊಲೆ ಪ್ರಕರಣದ ಆರೋಪಿಗಳಾಗಿದ್ದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್ ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಡಿದ ಆರೋಪದಲ್ಲಿ ಪ್ರೀತಮ್ ಪಾಟೀಲ್ ಬಂಧನವಾಗಿದೆ ಎಂದು ತಿಳಿದುಬಂದಿದೆ.