ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ

ಇತ್ತೀಚೆಗಷ್ಟೇ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಕನ್ನಡ ಚಿತ್ರರಂಗದ ನಟ ವಸಿಷ್ಟ ಸಿಂಹ, ಪತ್ನಿ ಹರಿಪ್ರಿಯಾ ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ನೆರವೇರಿಸಿದ್ದಾರೆ.

ಭಾನುವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದ ದಂಪತಿ, ತುಲಾಭಾರ ಸೇವೆಯ ಸಂದರ್ಭದಲ್ಲಿ 84 ಕೆ.ಜಿ.ಯ ಅಕ್ಕಿ ಮತ್ತು ಬೆಲ್ಲವನ್ನು ಸಮರ್ಪಿಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ನನ್ನ ಅಕ್ಕ ತುಲಾಭಾರ ಸೇವೆಯ ಹರಕೆ ಹೊತ್ತಿದ್ದರು. ಹೀಗಾಗಿ ಅದನ್ನು ಇಂದು ನೆರವೇರಿಸಿದ್ದೇವೆ ಎಂದು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read