BREAKING: ಕನ್ನಡ ಕಲಿಯದಿದ್ರೆ ಪರಭಾಷಿಗರು ಕರ್ನಾಟಕ ಬಿಟ್ಟು ಹೋಗಬೇಕು: ವಾಟಾಳ್ ನಾಗರಾಜ್ ವಾರ್ನಿಂಗ್

ಬೆಂಗಳೂರು: ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ, ಕನ್ನಡ ನಾಡು, ಭಾಷೆ, ನೆಲ-ಜಲ ರಕ್ಷಣೆಗಾಗಿ ಒತ್ತಾಯಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಕರೆ ನೀಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡಿಗರ ಮೇಲೆ ಪರಭಾಷಿಗರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರ ಮೇಲೆಯೇ ದೌರ್ಜನ್ಯ ನಡೆಸುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಿದರೆ ಬೇರೆ ರಾಜ್ಯದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವ ಘಟನೆ ನಡೆಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ನಿಲ್ಲಬೇಕು ಎಂದು ಗುಡುಗಿದರು.

ಈ ನಿಟ್ಟಿನಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿರುವ ಬೇರೆ ರಾಜ್ಯದವರು ಕನ್ನಡ ಕಲಿಯಲೇಬೇಕು. ಇಲ್ಲವಾದಲ್ಲಿ ಕರ್ನಾಟಕ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.

ತಮಿಳರು, ತೆಲುಗು, ಮಲಯಾಳಿಗಳು, ಗುಜರಾತಿಗಳು, ಬಿಹಾರಿಗಳು, ಮಾರ್ವಾಡಿಗರು ಯಾರೇ ಆಗಿರಲಿ ಕನ್ನಡ ಕಲಿಯಲೇಬೇಕು. ಇಲ್ಲದಿದ್ದರೆ ರಾಜ್ಯ ಬಿಟ್ಟು ಹೋಗಬೇಕು ಯಾವುದೇ ಮುಲಾಜಿಲ್ಲ. ನಾವು ಜೈಲಿಗೆ ಹೋದರು ತೊಂದರೆ ಇಲ್ಲ. ಕರ್ನಾಟಕದಲ್ಲಿ ಇರುವುದಾದರೆ ನೀವು ಕನ್ನಡ ಕಲಿಯಲೇಬೇಕು ಎಂದು ಎಚ್ಚರಿಕೆ ನಿಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read