ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ.

ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಕಡೇಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ. ಇಳಕಲ್ ನಲ್ಲಿರುವ ಪುತ್ರಿಗೆ ಬುತ್ತಿ ಕೊಡಲು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಕಡೇಕೊಪ್ಪ ಗ್ರಾಮದ ಬಳಿ ಮೃತ ರುಕ್ಮಿಣಿ ಡಾಬಾ ನಡೆಸುತ್ತಿದ್ದರು. ಕುಷ್ಟಗಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read